Saturday, February 22, 2025
Banner
Banner
Banner
Home » ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

by NewsDesk

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌‌ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್‌(22) ಕಿಶನ್‌(20) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.

ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್‌ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb