ಅಂಗಡಿಯ ಶೆಟರ್ ಒಡೆದು ಕಳ್ಳತನ; ಮೂವರು ಆರೋಪಿಗಳ ಬಂಧನ

ಉಡುಪಿ: ಶಿವಳ್ಳಿ ಗ್ರಾಮದ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌‌ನ ಶೆಟರ್‌ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ್‌ ಚಿದಾನಂದಪ್ಪ ನರತೆಲಿ(24) ಉಡುಪಿ ಜಿಲ್ಲೆಯ ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್‌(22) ಕಿಶನ್‌(20) ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್‌ ಲೇನ್‌ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್‌ ಸ್ಟೋರ್ಸ್‌ ನ ಶೆಟರ್‌ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.

ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್‌ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000/- ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related posts

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ….

Much Awaited Tulu movie Gajanana Cricketers set for worldwide release in January 2026

ಉಡುಪಿ ಪತ್ರಕರ್ತರ, ವೈದ್ಯಕೀಯ ಸಂಘದ ಸೂಚನಾ ಫಲಕ ಅನಾವರಣ