ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆ; ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ

ಮಣಿಪಾಲ : ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದ ಗ್ಯಾಂಗ್‌ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ ನಡೆದಿದೆ. ಈ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಇರುವ ಪಬ್ ಮತ್ತು ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

https://www.instagram.com/reel/C7rEjwmBkTt/?utm_source=ig_web_copy_link&igsh=MzRlODBiNWFlZA==

ಮಣಿಪಾಲ ಪೊಲೀಸರು ತಡರಾತ್ರಿ ಅವಧಿಗೂ ಮೀರಿ ಕಾರ್ಯಾಚರಿಸುತ್ತಿದ್ದ ಪಬ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳು ಮತ್ತು ಮಾದಕ ದ್ರವ್ಯಗಳ ಸೇವನೆಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಗಿದೆ.

“ಜಿಲ್ಲೆಯಲ್ಲಿ ಯಾವುದೇ ರೀತಿಯ ಕ್ರಿಮಿನಲ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು” ಎಂಬ ಉದ್ದೇಶದಿಂದ ಕಾರ್ಯಾಚರಣೆ ನಡೆದಿದೆ. ತಡ ರಾತ್ರಿ ವಿನಾ ಕಾರಣ ಅಲೆದಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲ ಸರ್ಕಲ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ