ತಂತಿ ಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ : ಮರಳಿ ಕಾಡಿಗೆ

ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ.

ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿತ್ತು. ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅವರಿಂದ ಕಾರ್ಯಾಚರಣೆ ನಡೆಯಿತು. ಮಂಗಳೂರಿನ ಅರಿವಳಿಕೆ ತಜ್ಞರಾದ ಯಶಸ್ವಿ ನಾರಾವಿ ಹಾಗೂ ಅಕ್ಷಯ್ ಶೇಟ್ ಸ್ಥಳಕ್ಕೆ ಬಂದು ಉರುಳಿನಲ್ಲಿ ಸಿಲುಕಿದ ಚಿರತೆಗೆ ಶೂಟ್ ಮಾಡಿ ಅರವಳಿಕೆ ಔಷಧ ನೀಡಿದರು. ಪ್ರಜ್ಞೆ ತಪ್ಪಿದ ಚಿರತೆಯನ್ನು ಬೋನಿನೊಳಗೆ ಹಾಕಿ, ನಿಗಾದಲ್ಲಿ ಇರಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಚಿರತೆಯನ್ನು ಸುರಕ್ಷಿತ ಅರಣ್ಯಕ್ಕೆ ಬಿಡಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ