ತಂತಿ ಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ : ಮರಳಿ ಕಾಡಿಗೆ

ಉಡುಪಿ: ತಂತಿ ಬೇಲಿಯಲ್ಲಿ ಸಿಲುಕಿ ಸಾಯುವ ಸ್ಥಿತಿಯಲ್ಲಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ಈ ರಕ್ಷಣಾ ಕಾರ್ಯಚರಣೆ ನಡೆದಿದೆ.

ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಗೆ ಸಿಲುಕಿಕೊಂಡ ಚಿರತೆ, ಹೊರಬರಲು ಪರದಾಡುತ್ತಿತ್ತು. ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿತ್ತು. ಸ್ಥಳೀಯರ ಮಾಹಿತಿ ಆಧಾರದ ಮೇಲೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅವರಿಂದ ಕಾರ್ಯಾಚರಣೆ ನಡೆಯಿತು. ಮಂಗಳೂರಿನ ಅರಿವಳಿಕೆ ತಜ್ಞರಾದ ಯಶಸ್ವಿ ನಾರಾವಿ ಹಾಗೂ ಅಕ್ಷಯ್ ಶೇಟ್ ಸ್ಥಳಕ್ಕೆ ಬಂದು ಉರುಳಿನಲ್ಲಿ ಸಿಲುಕಿದ ಚಿರತೆಗೆ ಶೂಟ್ ಮಾಡಿ ಅರವಳಿಕೆ ಔಷಧ ನೀಡಿದರು. ಪ್ರಜ್ಞೆ ತಪ್ಪಿದ ಚಿರತೆಯನ್ನು ಬೋನಿನೊಳಗೆ ಹಾಕಿ, ನಿಗಾದಲ್ಲಿ ಇರಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಚಿರತೆಯನ್ನು ಸುರಕ್ಷಿತ ಅರಣ್ಯಕ್ಕೆ ಬಿಡಲಾಗಿದೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್