ಭಾರೀ ಮಳೆ ಹಿನ್ನೆಲೆಯಲ್ಲಿ ರೇಶನಿಂಗ್ ಪದ್ಧತಿ ರದ್ದು – ನಗರಕ್ಕೆ ಇನ್ನು ನಿರಂತರ ನೀರು ಸರಬರಾಜು

ಉಡುಪಿ : ಜಿಲ್ಲೆಯಾದ್ಯಂತ ಹಾಗೂ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾರ್ಕಳದಲ್ಲಿರುವ ಮುಂಡ್ಲಿ ಅಣಿಕಟ್ಟಿನಲ್ಲಿ ನೀರು ತುಂಬಿದ್ದು, ಸದ್ರಿ ಅಣಿಕಟ್ಟಿನ 2 ಬಾಗಿಲುಗಳನ್ನು ತೆರೆದಿರುವುದರಿಂದ ಸ್ವರ್ಣ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಸ್ವರ್ಣ ನದಿಯ ಬಜೆ ಡ್ಯಾಂನಲ್ಲಿ ಸಾಕಷ್ಟು ಪ್ರಮಾಣದ ನೀರು ತುಂಬಿದ್ದು, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇಂದಿನಿಂದ ರೇಶನಿಂಗ್ ಪದ್ಧತಿಯ ನೀರನ್ನು ರದ್ದುಪಡಿಸಿ ನಿರಂತರವಾಗಿ ಉಡುಪಿ ನಗರಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ