ಭಾರೀ ಮಳೆ ಹಿನ್ನೆಲೆಯಲ್ಲಿ ರೇಶನಿಂಗ್ ಪದ್ಧತಿ ರದ್ದು – ನಗರಕ್ಕೆ ಇನ್ನು ನಿರಂತರ ನೀರು ಸರಬರಾಜು

ಉಡುಪಿ : ಜಿಲ್ಲೆಯಾದ್ಯಂತ ಹಾಗೂ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾರ್ಕಳದಲ್ಲಿರುವ ಮುಂಡ್ಲಿ ಅಣಿಕಟ್ಟಿನಲ್ಲಿ ನೀರು ತುಂಬಿದ್ದು, ಸದ್ರಿ ಅಣಿಕಟ್ಟಿನ 2 ಬಾಗಿಲುಗಳನ್ನು ತೆರೆದಿರುವುದರಿಂದ ಸ್ವರ್ಣ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಸ್ವರ್ಣ ನದಿಯ ಬಜೆ ಡ್ಯಾಂನಲ್ಲಿ ಸಾಕಷ್ಟು ಪ್ರಮಾಣದ ನೀರು ತುಂಬಿದ್ದು, ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇಂದಿನಿಂದ ರೇಶನಿಂಗ್ ಪದ್ಧತಿಯ ನೀರನ್ನು ರದ್ದುಪಡಿಸಿ ನಿರಂತರವಾಗಿ ಉಡುಪಿ ನಗರಕ್ಕೆ ನೀರು ಸರಬರಾಜು ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ