ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಮಣಿಪಾಲದಲ್ಲಿ ಕಲಾಕೃತಿ ಅನಾವರಣ

ಮಣಿಪಾಲ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ರಚಿಸಿದ ಕಲಾ‌ಕೃತಿಯನ್ನು ಕೆಎಂಸಿ ಅಸೋಸಿಯೆಟ್ ಡೀನ್ ಡಾ| ಕೃಷ್ಣಾನಂದ ಪ್ರಭು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ। ಅಶ್ವಿನಿ ಕುಮಾ‌ರ್ ಅನಾವರಣಗೊಳಿಸಿದರು.

ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಮುರಳೀಧರ್ ಕುಲಕರ್ಣಿ, ಕಲಾವಿದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೇಬೆಟ್ಟು ರಚಿಸಿದ ತಂಬಾಕು ಜಾಗೃತಿ ಕಲಾಕೃತಿ ಬಗ್ಗೆ ವಿವರಿಸಿದರು.

ಸಮುದಾಯ ವೈದ್ಯಕೀಯ ವಿಭಾಗದ ಡಾ| ವೀಣಾ ಕಾಮತ್, ಡಾ। ಚೈತ್ರಾ ರಾವ್, ಡಾ। ಸ್ನೇಹಾ ಕಾಮತ್, ಡಾ। ಈಶ್ವರಿ, ಡಾ| ಯಶ್, ಡಾ। ಅಖಿಲಾ, ಡಾ| ಮಂಜುಳಾ, ಡಾ| ಅರುಣ್‌ ದಾಸ್, ಸಮುದಾಯ ವೈದ್ಯಕೀಯ ವಿಭಾಗದ ಬೋಧಕೇತರ ಸಿಬಂದಿ, ಸ್ನಾತಕೋತ್ತರ ಹಾಗೂ ಪ.ಪೂ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ