ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ

ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನ ಗಮನ ಸೆಳೆದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ ಆರಂಭಿಸಲಾಗಿದೆ. ಪ್ರತಿ ಮನೆಯಲ್ಲೂ ಓದುಗರನ್ನು ಸೃಷ್ಟಿಸುವ ದೃಷ್ಟಿಯಿಂದ ಸಾಹಿತ್ಯ ಪರಿಷತ್ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ನೂತನ ಗ್ರಂಥಾಲಯ ಆರಂಭಿಸಿದ ಬಳಿಕ ಮಾತನಾಡಿದ ಡಿಸಿ ಡಾ.ವಿದ್ಯಾ ಕುಮಾರಿ, ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಸಹ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕಾಗಿಯೇ ಒಂದು ಕೊಠಡಿ ಮೀಸಲಿಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಿಸಿ ಕಚೇರಿಯ ಗ್ರಂಥಾಲಯಕ್ಕಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿ, ಶುಭ ಕೋರಿದರು. ಅನೇಕ ಸಾಹಿತಿಗಳು ಗ್ರಂಥಾಲಯಕ್ಕೆ ತಮ್ಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ