ಕಳವಾದ 27 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಉಡುಪಿ : ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾದ ಮೊಬೈಲ್ ಫೋನ್‌ಗಳನ್ನು ಪೊಲೀಸರು ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದರು.
ಒಟ್ಟು 4,22,689 ರೂ.ಮೌಲ್ಯದ ವಿವಿಧ ಕಂಪೆನಿಯ 27 ಮೊಬೈಲ್‌ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ.ನೇತೃತ್ವದಲ್ಲಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿತ್ತು.

ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಳವಾದ ದೂರುಗಳು ಬಂದಿದ್ದು, ಅನಂತರ ಆ ಮೊಬೈಲ್‌ಗಳನ್ನು ಸಿಎಸ್‌ಆರ್ ಪೋರ್ಟಲ್ ಆಪ್ಲಿಕೇಶನ್ ಅಡಿಯನ್ನು ಬ್ಲಾಕ್ ಮಾಡಿ 2025ನೇ ಸಾಲಿನಲ್ಲಿ 32 ಮೊಬೈಲ್‌ಗಳನ್ನು ಪತ್ತೆೆಹಚ್ಚಲಾಗಿತ್ತು. ಈ ಪೈಕಿ ಸುಮಾರು 5 ಮೊಬೈಲ್‌ಗಳನ್ನು ಈಗಾಗಲೇ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಡಿವೈಎಸ್‌ಪಿ ಪ್ರಭು ಡಿ.ಟಿ. ಮಾಹಿತಿ ನೀಡಿದರು.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar