ಬಿಜೆಪಿ ಪಾದಯಾತ್ರೆಯಲ್ಲಿ ಮಂಗಳೂರಿನ 5ಸಾವಿರ ಕಾರ್ಯಕರ್ತರು ಭಾಗಿ – ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು : ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಆ.3ರಿಂದ 10ರವರೆಗೆ ನಡೆಯುವ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ದ.ಕ.ಜಿಲ್ಲೆಯ ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ‌ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.

ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ವಿವಿಧ ದಿನಗಳಲ್ಲಿ, ವಿವಿಧ ಮೋರ್ಚಾದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ವ್ಯವಸ್ಥೆಗಾಗಿ ದ.ಕ.ಜಿಲ್ಲಾ ಯುವಮೋರ್ಚದ 200ರಷ್ಟು ಕಾರ್ಯಕರ್ತರು ಇಂದೇ ಬೆಂಗಳೂರಿಗೆ ತೆರಳಿದ್ದಾರೆ ಎಂದರು.

ನಾನು ಸೇರಿದಂತೆ ಎಂಎಲ್ಎ, ಮಾಜಿ ಶಾಸಕರುಗಳು, ಬಿಜೆಪಿಯ ಉನ್ನತಮಟ್ಟದ ನಾಯಕರುಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ನಾಯಕರ ಸೂಚನೆಯ ಮೇರೆಗೆ ಆ.8ರಂದು ದ.ಕ.ಜಿಲ್ಲೆಯ ಸುಮಾರು ಮೂರು ಸಾವಿರದಷ್ಟು ಕಾರ್ಯಕರ್ತರು ಒಂದೇ ದಿನ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್