Thursday, March 13, 2025
Banner
Banner
Banner
Home » ಮೂಳೂರು ಬಳಿ ಅಪರಿಚಿತ ವಾಹನ‌ ಡಿಕ್ಕಿ, ಯುವಕ ಸಾವು : ಮತ್ತೋರ್ವ ಗಂಭೀರ

ಮೂಳೂರು ಬಳಿ ಅಪರಿಚಿತ ವಾಹನ‌ ಡಿಕ್ಕಿ, ಯುವಕ ಸಾವು : ಮತ್ತೋರ್ವ ಗಂಭೀರ

by NewsDesk

ಕಾಪು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ಮೃತ ಸವಾರನನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವ ಸವಾರ ನಿಹಾಲ್ ವಿಲ್ಸನ್ ತೀವ್ರಗಾಯಗೊಂಡಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಕಾಪುವಿನಿಂದ ಪಡುಬಿದ್ರಿ ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ರಿತೇಶ್ ಶೆಟ್ಟಿ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಸ್ಕೂಟಿ ಸಮೇತ ಕೆಳಗೆ ಬಿದ್ದು ತೀವ್ರ ಗಾಯಗೊಂಡು ನರಳಾಡುತ್ತಿದ್ದ ಪ್ರತೀಶ್ ಮತ್ತು ನಿಹಾಲ್ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಪ್ರತೀಶ್ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತ ಯುವಕ ಪ್ರತೀಶ್ ಪ್ರಸಾದ್ ಕಾಪುವಿನ ಹಿರಿಯ ಛಾಯಾಗ್ರಾಹಕ ಭಕ್ತಪ್ರಸಾದ್ ಮತ್ತು ಉಷಾ ಭಕ್ತಪ್ರಸಾದ್ ದಂಪತಿಯ ಸುಪುತ್ರ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb