Thursday, March 13, 2025
Banner
Banner
Banner
Home » ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ

by NewsDesk

ಮಣಿಪಾಲ : ಮಕ್ಕಳ ಆಂಕೊಲಾಜಿ ವಿಭಾಗದ ಐತಿಹಾಸಿಕ ಬೆಳವಣಿಗೆಯಲ್ಲಿ, ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾದಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಇಮ್ಯುನೊಥೆರಪಿಯನ್ನು ನೀಡಲಾಗಿದೆ. ಈ ಇಮ್ಯುನೊಥೆರಪಿ ಪ್ರಸ್ತುತ ಈ ಕ್ಯಾನ್ಸರ್ ಅನ್ನು ಗುಣಪಡಿಸುವ ಏಕೈಕ ಚಿಕಿತ್ಸೆಯಾಗಿದೆ.

ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾ ಬಾಲ್ಯದಲ್ಲಿ ಬರುವ ಅಪರೂಪದ ಮತ್ತು ಸಂಕೀರ್ಣವಾದ ಕ್ಯಾನ್ಸರ್ ಆಗಿದೆ. ಇದಕ್ಕೆ ಸಾಧಾರಣವಾಗಿ ನೀಡುವ ಕಿಮೊಥೆರಪಿ, ಶಸ್ತ್ರಚಿಕಿತ್ಸೆ, ವಿಕಿರಣ ಚಿಕಿತ್ಸೆಯ ಜೊತೆಗೆ ಮೂಳೆ ಮಜ್ಜೆಯ ಕಸಿ, ಮತ್ತು ಇಮ್ಯುನೊಥೆರಪಿ ಅಗತ್ಯವಿರುತ್ತದೆ. ಆದ್ದರಿಂದ ಈ ಎಲ್ಲ ಚಿಕಿತ್ಸೆಯನ್ನು ಸಂಯೋಜಿಸುವ ಬಹುಶಿಸ್ತೀಯ ತಂಡದ ಅಗತ್ಯವಿರುತ್ತದೆ. ಡಿನುಟುಕ್ಸಿಮಾಬ್ ಬೀಟಾ ಇತ್ತೀಚೆಗೆ ಅನುಮೋದಿತ ಇಮ್ಯುನೊಥೆರಪಿ ಔಷಧವಾಗಿದ್ದು, ಇದು ಆಯ್ದ ನ್ಯೂರೋಬ್ಲಾಸ್ಟೊಮಾ ಕ್ಯಾನ್ಸರ್ ಕೋಶಗಳನ್ನು ನಾಶಮಾಡುತ್ತದೆ. ಇದರಿಂದಾಗಿ ಈ ಮಕ್ಕಳಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಫಲಿತಾಂಶ ಮತ್ತು ಬದುಕುಳಿಯುವಿಕೆಯು 30-40% ರಷ್ಟು ಹೆಚ್ಚಾಗಿದೆ. ಈ ಔಷಧವನ್ನು ಪ್ರಸ್ತುತ ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ.

ಈ ಪ್ರಕರಣದಲ್ಲಿ ಸವಾಲೆಂದರೆ ಇಮ್ಯುನೊಥೆರಪಿ ಚಿಕಿತ್ಸೆ ನೀಡುವ ವಿಧಾನದ ಬಗ್ಗೆ ಮಾಹಿತಿಯ ಅಗತ್ಯತೆ ಮತ್ತು ಔಷಧವನ್ನು ಆಮದು ಮಾಡಿಕೊಳ್ಳಲು ಹಣಕಾಸು ವ್ಯವಸ್ಥೆ ಮಾಡುವುದಾಗಿತ್ತು. ಮಕ್ಕಳ ಆಂಕೊಲಾಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ ಅವರ ಮಾರ್ಗದರ್ಶನದ ಮೇಲೆ ನುರಿತ ವೈದ್ಯರ ತಂಡವು ಈ ಇಮ್ಮ್ಯುನೊಥೆರಪಿ ಚಿಕಿತ್ಸೆಯನ್ನು ನೀಡಿದರು. ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಅರ್ಚನಾ ಎಂ.ವಿ. ಮಾತನಾಡಿ, ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಯಶಸ್ವಿಯಾಗಿ ಈ ತರಹದ ಇಮ್ಯುನೊಥೆರಪಿ ಕೋರ್ಸ್‌ಗೆ ಒಳಗಾದ ಮೊದಲ ಮಗು ಇದಾಗಿದ್ದು ಮತ್ತು ಸಹಯೋಗದ ತಂಡದ ಕೆಲಸದ ಮಹತ್ವವನ್ನು ಅವರು ಉಲ್ಲೇಖಿಸಿದರು. ಚಿಕಿತ್ಸೆಯು ಮುಗಿದು ಈಗ 12 ತಿಂಗಳು ತುಂಬಿದೆ, ಮಗು ಆರೋಗ್ಯವಾಗಿದ್ದು, ಶಾಲೆಗೆ ಹೋಗಲು ಸಿದ್ಧವಾಗಿದ್ದಾಳೆ.

ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಈ ಜೀವ ಉಳಿಸುವ ಪ್ರಯತ್ನದಲ್ಲಿ ಮಕ್ಕಳ ಆಂಕೊಲಾಜಿ ಮತ್ತು ಸಂಬಂಧಿತ ಕ್ಯಾನ್ಸರ್ ವಿಶೇಷತೆಗಳ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಯ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದರು. “ಈ ಸಾಧನೆಯು ಕರಾವಳಿ ಕರ್ನಾಟಕದಲ್ಲಿ ಕ್ಯಾನ್ಸರ್ ಪೀಡಿತ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುವುದಲ್ಲದೆ, ಮಕ್ಕಳ ಆಂಕೊಲಾಜಿಯಲ್ಲಿ ಪ್ರಗತಿಗೆ ದಾರಿದೀಪವಾಗಿಯೂ ಕಾರ್ಯನಿರ್ವಹಿಸುತ್ತದೆ” ಎಂದು ಅವರು ಹೇಳಿದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb