Friday, May 16, 2025
Banner
Banner
Banner
Home » ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

by NewsDesk

ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಮೇ 18‌ರಂದು ಬ್ರಾಹ್ಮ ಸಭಾಭವನದಲ್ಲಿ ಪ್ರಥಮ ಬಾರಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ – ಜಾನಪದ ನೃತ್ಯ ಸಂಭ್ರಮ 2025 ಅನ್ನು ಹಮ್ಮಿಕೊಂಡಿದೆ. 40ರ ಒಳಗಿನ ಹಾಗೂ 40ರ ಮೇಲಿನ ಹರೆಯದವರಿಗಾಗಿ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಸಹಿತ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಅದೇ ದಿನ ಮುಂಜಾನೆಯಿಂದ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಧವಿಧ ವಿಪ್ರ ಉದ್ಯಮಗಳ ಮಳಿಗೆಗಳಿಗೆ ಉಚಿತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಎಲ್ಲದಕ್ಕಿಂತಲೂ ಮುಖ್ಯವಾಗಿ ಅದೇ ದಿನ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ರುಚಿ ಶುಚಿಯಾದ ಆಹಾರ ಖಾದ್ಯಗಳ ಮೇಳವನ್ನು ಕೂಡ ಸಾರ್ವಜನಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಈ ಉದ್ಯಮ ಮೇಳ ಮತ್ತು ಆಹಾರ ಮೇಳ ಮುಂಜಾನೆ 9 ರಿಂದ ರಾತ್ರಿ 8 ಗಂಟೆಯವರೆಗೂ ತೆರೆದಿರುತ್ತದೆ. ಸಾರ್ವಜನಿಕರೆಲ್ಲರೂ ಈ ಕಾರ್ಯಕ್ರಮದಲ್ಲಿ ಮನೆಯವರು ಹಾಗೂ ಗೆಳೆಯರೊಂದಿಗೆ ಭಾಗವಹಿಸಿ ಅದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದೆ. ಚಂದ್ರಕಾಂತ್ ಕೆ.ಎನ್., ವಿಷ್ಣು ಪ್ರಸಾದ್ ಪಾಡಿಗಾರ್, ರಘುಪತಿ ರಾವ್, ಚೈತನ್ಯ ಎಂ. ಜಿ ಮತ್ತು ರವಿರಾಜ್ ಉಪಸ್ಥಿತರಿದ್ದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb