ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಚಾಲಕ ಅಬ್ದುಲ್ ರಹಮಾನ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವೇಳೆ ರಾಮಲ್ವಕಟ್ಟೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ಮಂಗಳೂರಿನಿoದ ಬಿಸಿರೋಡು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.