ನೆರೆಗೆ ಕೊಚ್ಚಿಕೊಂಡು ಹೋದ ಕಾರು; ಹೊರಕ್ಕೆ ಹಾರಿ ಪಾರಾದ ನಾಲ್ವರು!

ಉಡುಪಿ : ಉಡುಪಿಯಲ್ಲಿ ಮಳೆ ಮುಂದುವರಿದಿದ್ದು ಅಪಾರ ಆಸ್ತಿಪಾಸ್ತಿ ನಷ್ಡ ಸಂಭವಿಸಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವರನ್ನು ರಕ್ಷಣೆ ಮಾಡಲಾಗಿದೆ. ಈ ಮಧ್ಯೆ ನೆರೆ ನೀರಲ್ಲಿ ಕಾರೊಂದು ಕೊಚ್ಚಿಕೊಂಡು ಹೋಗಿದ್ದು,
ಅದೃಷ್ಟವಶಾತ್ ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿಯ ಕನ್ನರ್ಪಾಡಿ-ಕಡೆಕ್ಕಾರು ಸಂಪರ್ಕ ರಸ್ತೆಯಲ್ಲಿ ಸಂಭವಿಸಿದೆ.

ಮಳೆಗೆ ಸಂಪೂರ್ಣ ಜಲಾವೃತ ವಾಗಿದ್ದ ರಸ್ತೆಯಲ್ಲೇ ಕಾರು ಚಾಲಕ ಕಾರನ್ನು ಚಲಾಯಿಸಿದ್ದ. ಈ ವೇಳೆ ನೀರಿನ ಹರಿವಿನ ರಭಸಕ್ಕೆ ಕಾರು ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ವೇಳೆ ಕಾರಿನಿಂದ ಹೊರಕ್ಕೆ ಜಿಗಿದು ನಾಲ್ವರು ಪ್ರಾಣ ಉಳಿಸಿಕೊಂಡಿದ್ದಾರೆ. ಕೊನೆಗೆ ಗದ್ದೆಯಲ್ಲಿ ಸಿಲುಕಿಕೊಂಡ ಕಾರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ