ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ರಾಧಿಕಾ, ಪೊಲಿಪು ಮೋಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಕಾಪು ಪುರಸಭೆಯ ಮಾಜಿ ಸದಸ್ಯರಾದ ವಿಜಯ್ ಕರ್ಕೇರ, ಸ್ಥಳೀಯರಾದ ಸುಂದರ್ ಸುವರ್ಣ ಅಜಿತ್ ಮೆಂಡನ್ ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ