ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ರಾಧಿಕಾ, ಪೊಲಿಪು ಮೋಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಕಾಪು ಪುರಸಭೆಯ ಮಾಜಿ ಸದಸ್ಯರಾದ ವಿಜಯ್ ಕರ್ಕೇರ, ಸ್ಥಳೀಯರಾದ ಸುಂದರ್ ಸುವರ್ಣ ಅಜಿತ್ ಮೆಂಡನ್ ಉಪಸ್ಥಿತರಿದ್ದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ