ಭಾರೀ ಗಾಳಿಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ : ಮನೆ ಹಾಗೂ 2 ರಿಕ್ಷಾಗಳಿಗೆ ಹಾನಿ : ಲಕ್ಷಾಂತರ ರೂ. ನಷ್ಟ

ಉಡುಪಿ : ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದ ಮನೆಯ ಮೇಲೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ಆಟೋ ರಿಕ್ಷಾ ಜಖಂಗೊಂಡ ಘಟನೆ ಜು. 26ರಂದು ಶುಕ್ರವಾರ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಸಂಭವಿಸಿದೆ.

ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಗಾಳಿ ಮಳೆಗೆ ಬಜೆಯ ಅಮ್ಮಣ್ಣಿ ಶೇರಿಗಾರ್ತಿ ಎಂಬವರ ಮನೆ ಸಮೀಪದ ತೆಂಗಿನಮರ ಬಿದ್ದು ಮನೆ ಹಾನಿಯಾಗಿದ್ದು, ಮನೆ ಬಳಿ ನಿಲ್ಲಿಸಿದ್ದ ಅಮ್ಮಣಿಯವರ ಮಕ್ಕಳಾದ ಗಣಪತಿ ಶೇರಿಗಾರ ಹಾಗೂ ರವಿ ಶೇರಿಗಾರ ಎಂಬವರ ಆಟೋ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿವೆ ಎಂದು ತಿಳಿದು ಬಂದಿದೆ. ಅವರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ