ಚಿರತೆಯ ಹಾವಳಿಗೆ ಸಾಕು ನಾಯಿ ಬಲಿ

ಉಡುಪಿ : ಉಡುಪಿಯ ಪೆರ್ಡೂರು ಸಮೀಪ ಚಿರತೆಯ ದಾಳಿಯಿಂದ ಜನತೆ ಆತಂಕಗೊಂಡಿದ್ದು, ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜನವಸತಿ ಪ್ರದೇಶಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಚಿರತೆಗಳು ಸಾಕುಪ್ರಾಣಿಗಳನ್ನು ಬೇಟೆಯಾಡುತ್ತಿದ್ದು, ಇತ್ತೀಚಿಗೆ ಪೆರ್ಡೂರು ಗೋರೇಲ್‌ನಲ್ಲಿ ಹರಿನಾರಾಯಣ ಭಂಡಿಯವರ ಮನೆಯ ಸಾಕು ನಾಯಿ ಚಿರತೆಯ ಹಾವಳಿಗೆ ಬಲಿಯಾದ್ದು ಸ್ಥಳೀಯರಲ್ಲಿ ಭಯ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಜನರು ತಮ್ಮ ಮನೆಯ ಪರಿಸರದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ