ಪುಟ್ಟ ಮಗುವಿನೊಂದಿಗೆ ಸೇತುವೆ ಮೇಲೇರಿದ ತಂದೆ – ಆತ್ಮಹತ್ಯೆಗೆ ಯತ್ನ..?

ಮಂಗಳೂರು : ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವನು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯನ್ನು ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿಕೊಟ್ಟಿದ್ದಾರೆನ್ನಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್