ಹುತಾತ್ಮ ಸೈನಿಕನಿಗೆ ಅಂತಿಮ ನಮನ

ಕುಂದಾಪುರ : ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ತಾಲೂಕಿನ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ಅಂತ್ಯಕ್ರಿಯೆ ಇಂದು ಬೀಜಾಡಿಯ ಕಡಲ ತೀರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಸಾವಿರಾರು ಜನರು ಹಾಜರಿದ್ದ ಈ ಕಾರ್ಯಕ್ರಮದಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಪತ್ನಿ ಮಂಜುಶ್ರಿ ಅವರಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅವರ ಶೌರ್ಯವನ್ನು ಗೌರವಿಸಲಾಯಿತು.

ಅಂತ್ಯಕ್ರಿಯೆಯ ವೇಳೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಮುಗಿಲು ಮುಟ್ಟಿತು. ತಮ್ಮ ಪ್ರೀತಿಯ ಯೋಧನನ್ನು ಕಳೆದುಕೊಂಡ ಆಘಾತದಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತು.

ಈ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ ಗಂಟಿಹೊಳೆ ಮತ್ತು ಸರಕಾರಿ ಅಧಿಕಾರಿಗಳು ಭಾಗಿಯಾದರು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ