ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್