ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ