ಆಹಾರ ಅರಸಿಬಂದ ಅಪರೂಪದ ಕರಿಚಿರತೆ ಬಾವಿಗೆ; ಮಂದರ್ತಿ ಸಮೀಪದ ಶಿರೂರು ಹೆಮ್ಮಣಿಕೆ ಬಳಿ ಘಟನೆ

ಕುಂದಾಪುರ : ಬೇಟೆ ಅರಸಿ ಬಂದ ಕರಿ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಮಂದರ್ತಿ ಸಮೀಪದ ಶಿರೂರು ಹೆಮ್ಮಣಿಕೆ ಎಂಬಲ್ಲಿ ನಡೆದಿದೆ.

ಸ್ಥಳೀಯ ಕೃಷ್ಣ ನಾಯ್ಕ ಎಂಬವರ ಜಾಗ ದಲ್ಲಿರುವ ತೆರೆದ ಬಾವಿಗೆ ಶುಕ್ರವಾರ ತಡರಾತ್ರಿ ಕರಿ ಚಿರತೆ ಬಿತ್ತೆನ್ನಲಾಗಿದೆ. ಶನಿವಾರ ಸಂಜೆ ವೇಳೆಗೆ ಬಾವಿಯಲ್ಲಿ ಚಿರತೆ ಬಿದ್ದ ಬಗ್ಗೆ ತಿಳಿದ ತಕ್ಷಣ ಶೇಖರ್ ಶೆಟ್ಟಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಬಾವಿ ಸುತ್ತ ಬಲೆ ಹಾಕಿ ಕರಿ ಚಿರತೆ ರಕ್ಷಣೆಗೆ ಮುಂದಾದರು. ಆದರೆ ಕಾರ್ಯಾಚರಣೆ ವೇಳೆ ಚಿರತೆ ಬಲೆಯಿಂದ ಸರಿದು ಸಮೀಪದ ತೋಟದೊಳಕ್ಕೆ ಓಡಿ ಹೋಯಿತೆನ್ನಲಾಗಿದೆ. ಈ ಮೂಲಕ ಕರಿ ಚಿರತೆ ಸುರಕ್ಷಿತವಾಗಿ ಬಾವಿಯಿಂದ ಮೇಲಕ್ಕೆ ಬಂದು ಕಾಡು ಪ್ರದೇಶ ಸೇರಿದೆ ಎಂದು ತಿಳಿದುಬಂದಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ ನಿರ್ದೇಶನದಲ್ಲಿ ಶಂಕರ ನಾರಾಯಣ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪವಲಯ ಅರಣ್ಯಾಧಿ ಕಾರಿ ನಾಗರಾಜ ಮತ್ತು ಸಿಬ್ಬಂದಿ, ಸ್ಥಳೀಯರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ