ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ಬಾಲಕ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಬಾಲಕ ವಂಶಿ ಜಿ ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಮೃತಪಟ್ಟಿದ್ದಾನೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ