ರಸ್ತೆ ದಾಟುತ್ತಿದ್ದ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿ; ಬಾಲಕ ಸಾವು

ಬ್ರಹ್ಮಾವರ : ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ಬಾಲಕ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಬಾಲಕ ವಂಶಿ ಜಿ ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಮೃತಪಟ್ಟಿದ್ದಾನೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ