ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ : ಸ್ಥಳದಲ್ಲಿಯೇ ಕೊನೆಯುಸಿರೆಳೆದ ಟಿಪ್ಪರ್ ಚಾಲಕ

ಶಂಕರಪುರ : ಕಾರ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿದೆ.

ಮೃತ ಟಿಪ್ಪರ್ ಚಾಲಕನನ್ನು ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ್ (55) ಎಂದು ಗುರುತಿಸಲಾಗಿದೆ. ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ