ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಹೆಬ್ರಿ : ಮುದ್ರಾಡಿ ರಾಂಬೆಟ್ಟು ನಿವಾಸಿ ದಿ.ಉಪೇಂದ್ರ ಆಚಾರ್ಯ ಅವರ ಪತ್ನಿ ಕುಸುಮಾ ಆಚಾರ್ಯ ಎಂಬವರು ಶುಕ್ರವಾರ ಬೇಸಾಯದ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಜನಾನುರಾಗಿಯಾಗಿದ್ದ ಕುಸುಮಾ ಆಚಾರ್ಯ ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಕಾರ್ಯಕ್ರಮ, ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೆಬ್ರಿ ವಿಶ್ವಕರ್ಮ‌ ಮಹಿಳಾ ಮಂಡಳಿಯ ಸಕ್ರಿಯ ಸದಸ್ಯರು.
ಮೃತರು ದತ್ತು ಪುತ್ರಿಯನ್ನು ಅಗಲಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ