ಅಪಘಾತದ ಗಾಯಾಳುವನ್ನು ಸ್ಕೂಟಿಯಲ್ಲಿಯೇ ಆಸ್ಪತ್ರೆಗೆ ಸೇರಿಸಿದ ಮಹಿಳಾ ಪೊಲೀಸ್ – ಕಮಿಷನರ್ ಶ್ಲಾಘನೆ

ಮಂಗಳೂರು : ನಗರದಲ್ಲಿ ಮಂಗಳವಾರ ನಸುಕಿನ ವೇಳೆ ಸಂಭವಿಸಿರುವ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್‌ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.

ಮಂಗಳವಾರ ನಸುಕಿನ ವೇಳೆ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್‌ಅಪ್ ವಾಹನ ಹಾಗೂ ಕಂಟೈನರ್ ಲಾರಿಯ ಮಧ್ಯೆ ಅಪಘಾತ ಸಂಭವಿಸಿತ್ತು. ಲಾರಿಯ ಕ್ಲೀನ‌ರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸಬಲ್ ಮನ್ಶಿದಾ ಬಾನು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ತನ್ನ ಸ್ಕೂಟಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಚಾರವನ್ನು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗ್ರವಾಲ್ ಕಮಿಷನರೇಟ್ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಾನ್ ಸ್ಟೇಬಲ್ ಮನ್ಶಿದಾ ಬಾನು ಅವರ ಸಮಯಪ್ರಜ್ಞೆಯನ್ನು ಶ್ಲಾಘಿಸಿದ್ದಾರೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!