ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಲು ಹಾಗೂ ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದ ರಾಜ್ಯ ಸರ್ಕಾರದ ವಿರುದ್ಧ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟಿಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ನಗರ ಕಾರ್ಯದರ್ಶಿ ಶ್ರೀವತ್ಸ, ರಾಜ್ಯಾದ್ಯಂತ ಗ್ರಾಮೀಣ ಭಾಗಗಳಿಂದ ನಗರಕ್ಕೆ ಬಂದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಲಕ್ಷದಲ್ಲಿದೆ. ಅಂತೆಯೇ ಮುಖ್ಯವಾಗಿ ಉಡುಪಿಯಂತಹ ನಗರಕ್ಕೆ ಶಿಕ್ಷಣಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹೊರ ಜಿಲ್ಲೆಯಿಂದ ಬರುತ್ತಾರೆ. ಈಗಾಗಲೇ ಹೈಸ್ಕೂಲ್ ಮತ್ತು ಪಿಯುಸಿ ತರಗತಿಗಳು ಪ್ರಾರಂಭವಾಗಿ 40 ದಿನಗಳಾಗುತ್ತಾ ಬಂದರೂ ಇನ್ನು ಸಹ ಹಾಸ್ಟೆಲ್ ಸೀಟು ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ, ಶಿಕ್ಷಣ ವಂಚಿತರಾಗುತ್ತಿದ್ದಾರೆ. ಮತ್ತೊಂದೆಡೆ ವಿದ್ಯಾಸಿರಿ, ಕಾರ್ಮಿಕರ ನಿಧಿ ವಿದ್ಯಾರ್ಥಿ ವೇತನವೂ ಸಹ ಬಿಡುಗಡೆಯಾಗುತ್ತಿಲ್ಲ, ರೈತನಿಧಿ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ವಿಭಾಗ ಸಂಚಾಲಕರಾದ ಗಣೇಶ್ ಪೂಜಾರಿ, ಜಿಲ್ಲಾ ಸಂಚಾಲಕರಾದ ಕಾರ್ತಿಕ್ ಎಮ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ, ನಗರ ಸಹ-ಕಾರ್ಯದರ್ಶಿಗಳಾದ ಭಾವನಾ ಸೇರಿದಂತೆ ಪ್ರಮುಖರಾದ ಭೂಷಣ್, ಮನು, ಮಾಣಿಕ್ಯ, ಸ್ವಸ್ತಿಕ್, ನವೀನ್, ಅನಂತಕೃಷ್ಣ ಮತ್ತಿತರರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ