ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಅಪಘಾತ : ಇಬ್ಬರು ಪ್ರಯಾಣಿಕರಿಗೆ ಗಾಯ

ಉಪ್ಪಿನಂಗಡಿ : ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಇಂದು ಬೆಳಗ್ಗೆ ಇಲ್ಲಿನ ನೆಕ್ಕಿಲಾಡಿಯಲ್ಲಿ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್ ಜೋಗಿಬೆಟ್ಟು ಎಂಬವರ ಆಟೋ ರಿಕ್ಷಾಕ್ಕೆ ಪುತ್ತೂರು ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಕಾರು ಉಪ್ಪಿನಂಗಡಿ ಕಡೆ ಹೋಗಲು ತಿರುವು ಪಡೆದು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ ಪಡೆಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಿಂದ ರಿಕ್ಷಾದ ಒಂದು ಭಾಗ ಜಖಂಗೊಂಡಿದೆ. ರಿಕ್ಷಾದಲ್ಲಿ ಇಬ್ಬರು ಪ್ರಯಾಣಿಕರಿದ್ದು, ಅವರು ಅಲ್ಪ ಪ್ರಮಾಣದ ಗಾಯಗೊಂಡು, ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಗಾಯಾಳುಗಳನ್ನು ಅಲ್ಲಿಯೇ ಇದ್ದ ಅಟೋ ಚಾಲಕ ಕಲಂದರ್ ಶಾಫಿ ತಕ್ಷಣ ಆಸ್ಪತ್ರೆಗೆ ಕರೆತರುವಲ್ಲಿ ನೆರವಾದರು.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!