ಮಹೀಂದ್ರಾ ಪಿಕಪ್‌ – ಆಟೋರಿಕ್ಷಾ ನಡುವೆ ಅಪಘಾತ – ಆಟೋ ಚಾಲಕನಿಗೆ ಗಾಯ

ಉಡುಪಿ : ಸಂತೆಕಟ್ಟೆ ಸಮೀಪದ ಆಶೀರ್ವಾದ ಜಂಕ್ಷನ್‌ ಬಳಿ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಮಹೀಂದ್ರಾ ಪಿಕಪ್‌ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆಟೋರಿಕ್ಷಾ ಚಾಲಕನ ತಲೆ ಹಾಗೂ ಕೈ ಕಾಲುಗಳಿಗೆ ಪೆಟ್ಟಾಗಿ ತೀವ್ರ ಗಾಯಗೊಂಡ ಘಟನೆ ಸಂಭವಿಸಿದೆ.

ಈ ಘಟನೆ ನಡೆದು ಕೆಲ ಹೊತ್ತಾದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಯಾರೂ ಮುಂದೆ ಬಂದಿಲ್ಲ. ಅದೇ ದಾರಿಯಾಗಿ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಮಲ್ಪೆಯ ಬ್ರದರ್ಸ್‌ ಟೂರಿಸ್ಟ್‌ ಬಸ್ಸು ಚಾಲಕ ಬುರ್ಹಾನ್‌ ಮಲ್ಪೆ ಹಾಗೂ ನವೀನ್‌ ಹನುಮಾನ್‌ ನಗರ ಬಸ್ಸನ್ನು ನಿಲ್ಲಿಸಿ ವಿಚಾರಿಸಿದರು.

ಪ್ರಜ್ಞಾಹೀನರಾಗಿ ರಕ್ತಸಿಕ್ತವಾಗಿ ಬಿದ್ದಿದ್ದ ಗಾಯಾಳುವನ್ನು ಕಂಡು ತತ್‌ಕ್ಷಣ ತಮ್ಮ ಟೂರಿಸ್ಟ್‌ ಬಸ್‌ನ ಮುಖಾಂತರ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳಗಡೆ ಬಸ್ಸನ್ನೇ ಕೊಂಡು ಹೋಗಿ ಗಾಯಾಳುವನ್ನು ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ