ಸ್ಕೂಟರ್-ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ.

ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್‌ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್ ಗಂಭೀರವಾಗಿ ಗಾಯಗೊಂಡಿದ್ದು, ಸಹ ಸವಾರ ಸಂದೀಪ್ ಅವರಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜ ಸೇವಕ ವಿಶು ಶೆಟ್ಟಿ ಅವರು, ತನ್ನ ಜೀಪಿನಲ್ಲಿ ಗಾಯಾಳುಗಳನ್ನು ಕರೆದೊಯ್ದು ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ