ಸ್ಕೂಟರ್-ಲಾರಿ ಮಧ್ಯೆ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಉಡುಪಿ : ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲಪಾಡಿ ರಾಷ್ಟೀಯ ಹೆದ್ದಾರಿ 66ರಲ್ಲಿ ಗುರುವಾರ ನಡೆದಿದೆ.

ಗಾಯಗೊಂಡವರನ್ನು ಪಡುಬಿದ್ರೆ ನಿವಾಸಿಗಳಾದ ನಿಕಿಲ್ ಹಾಗೂ ಸಂದೀಪ್‌ ಎಂದು ಗುರುತಿಸಲಾಗಿದೆ. ಸವಾರ ನಿಕಿಲ್ ಗಂಭೀರವಾಗಿ ಗಾಯಗೊಂಡಿದ್ದು, ಸಹ ಸವಾರ ಸಂದೀಪ್ ಅವರಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜ ಸೇವಕ ವಿಶು ಶೆಟ್ಟಿ ಅವರು, ತನ್ನ ಜೀಪಿನಲ್ಲಿ ಗಾಯಾಳುಗಳನ್ನು ಕರೆದೊಯ್ದು ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!