ಆರೋಪಿ ಕಾಲಿಗೆ ಗುಂಡೇಟು ಪ್ರಕರಣ – ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಣಿಪಾಲ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಸಾಕ್‌ನನ್ನು ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಸಾಕ್ ಜೊತೆ ಇದ್ದ ಇತರ ಆರೋಪಿಗಳಾದ ರಾಹಿದ್(25), ಸಾಮಿಲ್ (26), ನಿಜಾಮುದ್ದೀನ್(26) ಇವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ನೀಡಿದೆ.

ಘಟನೆ ನಡೆದ ಸ್ಥಳದಲ್ಲಿ ಸ್ಥಳ ಮಹಜರು ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್. ಸಿಂಧ್ಯಾ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ; ಟಕ್ ಶಾಪ್ ಮೂಲಕ ಸ್ವ-ಆರೈಕೆ ಮತ್ತು ಉದ್ಯಮಶೀಲತೆಯ ಮೂಲಕ ಮಹಿಳೆಯರ ಸಬಲೀಕರಣ

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ