ನಿವೇಶನರಹಿತ ಅರ್ಹರಿಗೆ ಹಕ್ಕುಪತ್ರ ವಿತರಿಸಲು ಕ್ರಮ : ಜಿಲ್ಲಾಧಿಕಾರಿ

ಉಡುಪಿ : ಜಿಲ್ಲೆಯ ನಿವೇಶನ ರಹಿತ ಅರ್ಹ ಫ‌ಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಿದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ. ಪಂ. ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫ‌ಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾ.ಪಂ.ಗಳಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯ ವಿರುವ ಜಮೀನು ಗುರುತಿಸುವ ಕಾರ್ಯ‌ವನ್ನು ತಹಶೀಲ್ದಾರರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ಸಮನ್ವಯ‌ದೊಂದಿಗೆ ಮಾಡಬೇಕು ಎಂದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ