ಅದಮಾರು ಶಾಲಾ ವಿದ್ಯಾರ್ಥಿಗೆ ಅಟೋ ರಿಕ್ಷಾ ಢಿಕ್ಕಿ – ಕಾಲುಗಳಿಗೆ ಗಂಭೀರ ಗಾಯ; ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆ

ಪಡುಬಿದ್ರಿ : ಅಟೋ ರಿಕ್ಷಾ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅದಮಾರು ಪೂರ್ಣಪ್ರಜ್ಞಾ ಶಾಲಾ ಆಂಗ್ಲ ಮಾಧ್ಯಮ ವಿಭಾಗದ ಒಂದನೇ ತರಗತಿ ವಿದ್ಯಾರ್ಥಿಗೆ ರಿಕ್ಷಾ ಢಿಕ್ಕಿಹೊಡೆದ ಪರಿಣಾಮ ಎರಡೂ ಕಾಲಿಗೂ ಗಂಭೀರ ಗಾಯಗಳಾದ ಘಟನೆ ಶಾಲಾ ಆವರಣದಲ್ಲೇ ಸಂಭವಿಸಿದೆ.

ಗಾಯಗೊಂಡ ಬಾಲಕ ಎರ್ಮಾಳು ಬರ್ಪಣಿ ಸಂತೋಷ್ ಶೆಟ್ಟಿಯವರ ಪುತ್ರ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ಭವಿನ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಶಾಲೆ ಬಿಟ್ಟ ಸಂದರ್ಭ ಮನೆಗೆ ಹೋಗಲು ಶಾಲಾ ಆವರಣದ ಒಳಗೆ ತಂದೆಯನ್ನು ಕಾಯುತ್ತಿರುವ ವೇಳೆ, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಅಟೋ ತಂದೆಯನ್ನು ಕಾಯುತ್ತಿದ್ದ ಪುಟಾಣಿ ಬಾಲಕನಿಗೆ ನೇರವಾಗಿ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಬಾಲಕನ ಎರಡೂ ಕಾಲುಗಳಿಗೂ ಗಂಭೀರ ಗಾಯಗಳಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಅಪಘಾತಕ್ಕೆ ಅಟೋ ರಿಕ್ಷಾ ಚಾಲಕ ಸದಾನಂದ ದೇವಾಡಿಗ ಹಾಗೂ ಆಡಳಿತ ಮಂಡಳಿಯ ವಿರುದ್ಧ ಬಾಲಕನ ತಂದೆ ಸಂತೋಷ್ ಶೆಟ್ಟಿ ಬರ್ಪಾಣಿ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ