ಕಾಪು : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಕಾರ್ಯಕ್ರಮ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಶಾಸಕರು ಸಾರ್ವಜನಿಕರಿಗಾಗಿ ಸರಕಾರ ಅನೇಕ ವಿಮಾ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಸಾರ್ವಜನಿಕರಿಗೆ ಇದರ ಬಗ್ಗೆ ಮಾಹಿತಿಯ ಕೊರತೆ ಇದೆ. ಪ್ರತಿ ಗ್ರಾಮಗಳಲ್ಲಿ ಇಂತಹ ಶಿಬಿರಗಳನ್ನು ಹಮ್ಮಿಕೊಂಡಾಗ ಇದರಿಂದ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ ಎಂದರು ಅಂಚೆ ಇಲಾಖೆ ಜಾರಿಗೆ ತಂದಿರುವ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮಾಡಿಸಿ ಸಾರ್ವಜನಿಕರು ಇರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ್ ಭಟ್, ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಕಾರ್ಯದರ್ಶಿಗಳಾದ ಪ್ರಸಾದ್ ಭಂಡಾರಿ, ಇಂಡಿಯನ್ ಪೋಸ್ಟ್ ಬ್ಯಾಂಕ್ ಅಧಿಕಾರಿಗಳಾದ ಸ್ಮಿತಾ, ದಯಾನಂದ ಉಪಸ್ಥಿತರಿದ್ದರು.
