ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈ ದೊಡ್ಡ ಮಟ್ಟದ ಯಶಸ್ಸಿನ ಹಿಂದೆ ಇರುವ ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ ಮಧ್ಯ, ಚಕ್ಕುಲಿ, ಬೀಡ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ ನಟ, ನಿರ್ದೇಶಕ ರಿಶಬ್ ಶೆಟ್ಟಿ. ಹೌದು, ಈ ಸನ್ನಿಧಾನದಲ್ಲಿರುವ ಬಬ್ಬುಸ್ವಾಮಿ, ಕೊರಗಜ್ಜ, ಬಳಿ ಪ್ರಾರ್ಥನೆ ಮಾಡಿದ ವೇಳೆ ಪಂಜುರ್ಲಿ ದೈವದ ಮೇಲೆ ಕಥೆ ನಿರ್ಮಿಸಿ ಎನ್ನುವ ನುಡಿ ಕೇಳಿ ಬಂದಿತ್ತಂತೆ. ಈ ಹಿನ್ನಲೆ ಕಾಂತಾರ ದೊಡ್ಡ ಸಕ್ಸಸ್ ಕಂಡಿತ್ತು. ಈ ಯಶಸ್ಸಿನ ಬಳಿಕ ಮತ್ತೆ ರಿಶಬ್ ಶೆಟ್ಟಿ ಪತ್ನಿ, ಮಕ್ಕಳ ಜೊತೆ ಆಗಮಿಸಿ ಕೊರಗಜ್ಜ, ಬಬ್ಬುಸ್ವಾಮಿಗೆ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದ್ರು. ಈಗಾಗಲೇ ನಡೆಯುತ್ತಿರುವ ಕಾಂತಾರ ಭಾಗ ೧ ಸಿನಿಮಾಗೂ ದೊಡ್ಡ ಮಟ್ಟದ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೈವಸ್ಥಾನದ ಆಡಳಿತ ಮಂಡಳಿ ರಿಶಬ್ ಶೆಟ್ಟಿ ಕುಟುಂಬವನ್ನ ಗೌರವಿಸಿತು. ರಿಶಬ್ ಬರೋದನ್ನೇ ಕಾಯುತ್ತಿದ್ದ ಅಭಿಮಾನಿಗಳು ಸೆಲ್ಪಿ ತೆಗೆದು ಖುಷಿಪಟ್ರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.