Friday, February 21, 2025
Banner
Banner
Banner
Home » ‘ಸಾಕುತಂದೆ ರೂಮಿ’ ಕೃತಿಗೆ ಅಂಬಾತನಯ ಮುದ್ರಾಡಿ ಪ್ರಶಸ್ತಿ : ಡಾ. ತಲ್ಲೂರು ಮಾಹಿತಿ; ಮಾ.27ರಂದು ಪುರಸ್ಕಾರ ಪ್ರದಾನ

‘ಸಾಕುತಂದೆ ರೂಮಿ’ ಕೃತಿಗೆ ಅಂಬಾತನಯ ಮುದ್ರಾಡಿ ಪ್ರಶಸ್ತಿ : ಡಾ. ತಲ್ಲೂರು ಮಾಹಿತಿ; ಮಾ.27ರಂದು ಪುರಸ್ಕಾರ ಪ್ರದಾನ

by NewsDesk

ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ. ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿ ಅವರ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್.ಸಿ. ಮಹೇಶ್ ಅವರ ಸಾಕುತಂದೆ ರೂಮಿ ನಾಟಕ ಕೃತಿ ಆಯ್ಕೆಯಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ವಿಶ್ವರಂಗಭೂಮಿ ದಿನವಾದ ಮಾ.27ರಂದು ರಂಗಭೂಮಿ (ರಿ.) ಉಡುಪಿ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಸಹಯೋಗದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಮೂವರು ತೀರ್ಪುಗಾರರ ಸಮಿತಿಯ ಸಲಹೆಯಂತೆ ಈ ಕೃತಿ ಆಯ್ಕೆ ಮಾಡಲಾಗಿದೆ ಎಂದು ರಂಗಭೂಮಿ (ರಿ.) ಉಡುಪಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಟಕೇತರ ಸಾಹಿತ್ಯ ಕೃತಿ ಪರಿಗಣನೆ : ಅಂಬಾತನಯ ಮುದ್ರಾಡಿ ಅವರ ಸಂಸ್ಮರಣೆಯಲ್ಲಿ ಕಳೆದ ಎರಡು ವರ್ಷದಲ್ಲಿ ಪ್ರಕಟವಾದ ಕನ್ನಡ ನಾಟಕ ಕೃತಿಗೆ ನೀಡಲಾಗುವ ದ್ವಿತೀಯ ವರ್ಷದ ಪುರಸ್ಕಾರ ಇದಾಗಿದ್ದು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು 15 ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಕಳೆದ ವರ್ಷ ಈ ಪ್ರಶಸ್ತಿಯು ರಂಗಭೂಮಿಗೆ ಪ್ರಸ್ತುತವಾದ ಗಂಭೀರ ಚಿಂತನೆಯ ನಾಟಕೇತರ ಸಾಹಿತ್ಯ ಕೃತಿಯಾದ ಮೌನೇಶ್ ಬಡಿಗೇರ ಅವರ ಅಭಿನಯ ಕಲಿಸಲು ಸಾಧ್ಯವಿಲ್ಲ ಎಂಬ ಪುಸ್ತಕಕ್ಕೆ ಲಭಿಸಿತ್ತು. ಅಂಬಾತನಯ ಮುದ್ರಾಡಿ ಅವರ ಸಂಸ್ಮರಣೆಯಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ.) ಸಹಯೋಗದಲ್ಲಿ ರಂಗಭೂಮಿಯು ನಿರಂತರವಾಗಿ ನಾಟಕ ಸ್ಪರ್ಧೆ ನಡೆಸುತ್ತಲಿದೆ. ಮುಂದಿನ ವರ್ಷದ ಪುರಸ್ಕಾರಕ್ಕೆ 2023 ಮತ್ತು 2024ರ ಈ ಎರಡು ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಹಾಗೂ ರಂಗಭೂಮಿಗೆ ಪ್ರಸ್ತುತವಾಗಿ ಗಂಭೀರ ಚಿಂತನೆಯುಳ್ಳ ನಾಟಕೇತರ ಸ್ವತಂತ್ರ ಸಾಹಿತ್ಯ ಕೃತಿಯನ್ನು ಪರಿಗಣಿಸಲಾಗುವುದು ಎಂದು ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb