ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಲೆಕ್ಟ್ರಿಷಿಯನ್

ಮಣಿಪಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಇಲೆಕ್ಟ್ರಿಶಿಯನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ.

ಕಂಚಿನಬೈಲು ನಿವಾಸಿ ಸುರೇಶ್ ಮೃತ ದುರ್ದೈವಿ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ ಹೋಗಿದ್ದು, ನಂತರ ನಾಪತ್ತೆಯಾಗಿದ್ದ ಸುರೇಶ್‌ಗೆ ಹುಡುಕಾಟ ನಡೆಸಿದಾಗ ಡಿ.1ರಂದು ಮನೆ ಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಶವವನ್ನು ವೈದ್ಯಕೀಯ‌ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ