ಕೆಲಸ ಸಿಗದ ಚಿಂತೆಯಲ್ಲಿ ಇಂಜಿನಿಯರ್ ಪದವೀಧರ ಆತ್ಮಹತ್ಯೆ

ಕಾರ್ಕಳ : ಕೆಲಸ ಸಿಗದ ಚಿಂತೆಯಲ್ಲಿ ಇಂಜಿನಿಯರ್ ಪದವೀಧರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಣೂರು ಎಂಬಲ್ಲಿ ಸಂಭವಿಸಿದೆ.

ಮೃತರನ್ನು ಸಾಣೂರು ಗ್ರಾಮದ ಸುರೇಶ ಎಂಬವರ ಮಗ ಸುಮಂತ್(22) ಎಂದು ಗುರುತಿಸಲಾಗಿದೆ. ಇವರು ಇಂಜಿನಿಯರಿಂಗ್‌ ವಿದ್ಯಾಬ್ಯಾಸ ಮುಗಿಸಿದ್ದು ಕೆಲಸ ಸಿಗಲಿಲ್ಲ ಎಂಬ ಕೊರಗಿನಿಂದ ಅಥವಾ ಬೇರೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ