ನದಿ ನೀರಲ್ಲಿ ಕೊಚ್ಚಿಹೋಗಿದ್ದ ಆನಂದ ಎಂಬವರ ಮೃತದೇಹ ಪತ್ತೆ

ಉಡುಪಿ : ನಾಡ್ಪಾಲು ಗ್ರಾಮದ ಚೇರೋಳಿಯಲ್ಲಿ ಬುಧವಾರ ನೀರು ಪಾಲಾದ ಆನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆಯಿಂದ ಆನಂದ ಅವರ ಮೃತದೇಹವನ್ನು 4 ಕಿ.ಮೀ. ದೂರದಲ್ಲಿ ಪತ್ತೆಹಚ್ಚಲಾಯಿತು.

ನಾಡ್ಪಾಲಿನಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆನಂದ, ನದಿಯನ್ನು ಹಗ್ಗದ ಸಹಾಯದಿಂದ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದರು.

ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಸದಸ್ಯರು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ