ನದಿ ನೀರಲ್ಲಿ ಕೊಚ್ಚಿಹೋಗಿದ್ದ ಆನಂದ ಎಂಬವರ ಮೃತದೇಹ ಪತ್ತೆ

ಉಡುಪಿ : ನಾಡ್ಪಾಲು ಗ್ರಾಮದ ಚೇರೋಳಿಯಲ್ಲಿ ಬುಧವಾರ ನೀರು ಪಾಲಾದ ಆನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆಯಿಂದ ಆನಂದ ಅವರ ಮೃತದೇಹವನ್ನು 4 ಕಿ.ಮೀ. ದೂರದಲ್ಲಿ ಪತ್ತೆಹಚ್ಚಲಾಯಿತು.

ನಾಡ್ಪಾಲಿನಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆನಂದ, ನದಿಯನ್ನು ಹಗ್ಗದ ಸಹಾಯದಿಂದ ದಾಟುತ್ತಿದ್ದಾಗ ಕೊಚ್ಚಿಹೋಗಿದ್ದರು.

ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಸದಸ್ಯರು ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ