“ಜನಪದ ವೈದ್ಯಸಿರಿ” ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..

ಉಡುಪಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಉಡುಪಿಯ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂಲಕ ನೀಡುವ ರಾಜ್ಯ ಮಟ್ಟದ ಜನಪದ ವೈದ್ಯಸಿರಿ ಪ್ರಶಸ್ತಿಗಾಗಿ ಕರ್ನಾಟಕದ ಮೂಲೆಮೂಲೆಗಳಲ್ಲಿ ಅನೇಕರು ಪರಂಪರಾಗತ ವೈದ್ಯ ಪದ್ಧತಿಯನ್ನು ಮುಂದುವರಿಸಿ ಕೊಂಡು ಜನಸೇವೆ‌ಯಲ್ಲಿ ತತ್ಪರರಾಗಿರುವವರು ಇದ್ದು, ಅವರ ಜ್ಞಾನ ಭಂಡಾರದ ಉಳಿವಿಗಾಗಿ ಹಾಗೂ ಪ್ರೋತ್ಸಾಹಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ

ಕನಿಷ್ಠ 15 ವರ್ಷ ಸೇವಾನುಭವವುಳ್ಳ ಕರ್ನಾಟಕದ ನುರಿತ ನಾಟಿವೈದ್ಯರು ಅಥವಾ ಅವರ ಪ್ರತ್ಯಕ್ಷ ಮಾಹಿತಿಯುಳ್ಳವರು ಈ ಕೆಳಗಿನ ವಿವರಗಳನ್ನು ಆಯಾ ಗ್ರಾಮಪಂಚಾಯತ್ ಅಧ್ಯಕ್ಷರ ಶಿಫಾರಸು ಪತ್ರದೊಂದಿಗೆ ಕಳುಹಿಸಲು ಕೋರಲಾಗಿದೆ.

ಜನಪದ ವೈದ್ಯರ ಸಂಪೂರ್ಣ ಹೆಸರು, ಇತ್ತೀಚಿಗಿನ ಭಾವಚಿತ್ರ, ವಯಸ್ಸು, ವಿದ್ಯಾಭ್ಯಾಸ, ವೃತ್ತಿ, ಲಿಂಗ, ಖಾಯಂ ವಿಳಾಸ, ದೂರವಾಣಿ ಸಂಖ್ಯೆ ಯಾವ ಕಾಯಿಲೆಯ ಚಿಕಿತ್ಸೆಗೆ ಪರಿಣತರು, ಗುರುವಿನ ಹೆಸರು, ಎಷ್ಟು ವರ್ಷದ ಅನುಭವ, ಬಳಸುವ ಔಷಧ ಮೂಲಗಳು (ಸಸ್ಯ/ಖನಿಜ), ಸ್ವಂತ ಔಷಧಿ ತಯಾರಿಸುತ್ತಾರೆಯೇ, ಹಳೆಯ ಗ್ರಂಥಗಳಿವೆಯೇ, ಅನುಭವದ ದಾಖಲಾತಿ ಇದೆಯೋ, ಇತರೆ ಪ್ರಮಾಣ ಪತ್ರ, ಇತರೆ ಸನ್ಮಾನ ಪತ್ರ ಇದೆಯೋ ಎಂಬುದರ ಬಗ್ಗೆ ಮಾಹಿತಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು.

ಪ್ರಾಂಶುಪಾಲರು, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಅಂಚೆ: ಕುತ್ಪಾಡಿ, ಉಡುಪಿ ಜಿಲ್ಲೆ – 574118.

ಈ ವಿಳಾಸಕ್ಕೆ ಆಗಸ್ಟ್ 20ರ ಒಳಗೆ ಕಳುಹಿಸಿಕೊಡಬೇಕು ಎಂದು ಎಸ್‌ಡಿಎಂ ಕಾಲೇಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ