ಗೋಕಳ್ಳತನದ ಆರೋಪಿಗಳಿಬ್ಬರ ಬಂಧನ : ಕಾರುಗಳು ವಶ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಗೋ ಕಳ್ಳತನ ಮಾಡಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಶಿರೂರುಪೇಟೆಯ ಮಂಜುನಾಥ ಹೋಟೆಲ್ ಎದುರಿನಲ್ಲಿ ಮಲಗಿದ್ದ ಗೋವುಗಳನ್ನು ಇವರು ಕದ್ದಿರುವುದಾಗಿ ಸಾರ್ವಜನಿಕರು ದೂರು ನೀಡಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಬೈಂದೂರು ಪೊಲೀಸರು ಆರೋಪಿಗಳಾದ ಅಬ್ದುಲ್ ಸಮಾದ್ ಮತ್ತು ಅಬ್ದುಲ್ ರೆಹಮಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ತಾಲೂಕಿನ ಹಾಲಾಡಿ ರಸ್ತೆಯ ಫ್ಯಾಕ್ಟರಿ ಒಂದರ ಬಳಿ ಆರೋಪಿಗಳನ್ನು ವಶಕ್ಕೆ ಪಡೆದು ಕೃತ್ಯಕ್ಕೆ ಬಳಸಿದ ಎರಡು ಕಾರುಗಳು, ಮೊಬೈಲ್, ಕೃತ್ಯದ ವೇಳೆ ಬಳಸಿದ್ದ ಚೂರಿಯನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಒಟ್ಟು ಒಂಬತ್ತು ಲಕ್ಷ ರೂಪಾಯಿ ಆಗಿರುತ್ತದೆ. ಬೈಂದೂರು ಭಾಗದಲ್ಲಿ ಗೋಕಳ್ಳತನ ಪ್ರಕರಣ ಹೆಚ್ಚುತ್ತಿದ್ದು 24 ಗಂಟೆಗಳ ಅವಧಿಯಲ್ಲಿ ಎರಡು ಪ್ರಕರಣಗಳನ್ನು ಭೇದಿಸಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ