ಭಿಕ್ಷೆಯ ಹಣ 1.16 ಲಕ್ಷ ರೂ. ದೇಗುಲಕ್ಕೆ ದಾನ ಮಾಡಿದ ಅಶ್ವತ್ಥಮ್ಮ; ಈ ಮೊದಲು 6 ಬಾರಿ ಕೊಟ್ಟಿದ್ದರು!

ಕುಂದಾಪುರ : ಭಿಕ್ಷೆ ಬೇಡಿ ಬಂದ ಹಣದಲ್ಲಿ ಉಳಿತಾಯ ಮಾಡಿ ದೇವಸ್ಥಾನಕ್ಕೆ ದೇಣಿಗೆ ನೀಡುವ ಮೂಲಕ ಗಂಗೊಳ್ಳಿ ಕಂಚುಗೋಡು ನಿವಾಸಿ ಅಶ್ವತ್ಥಮ್ಮ ಬೆರಗು ಮೂಡಿಸಿದ್ದಾರೆ. ಕುಂದಾಪುರದ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭಿಕ್ಷೆ ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ. ಗಳನ್ನು ಅಶ್ವತ್ಥಮ್ಮ ದಾನವಾಗಿ ನೀಡಿದ್ದಾರೆ.

ಶಬರಿಮಲೆಯ ಪರಮ ಭಕ್ತೆಯಾಗಿರುವ ಈಕೆ ಈ ಮೊದಲು ಆನೆಗುಡ್ಡೆ ಕುಂಭಾಶಿ ದೇವಸ್ಥಾನ, ಮಂಗಳಾದೇವಿ, ಬಪ್ಪನಾಡು, ಪೊಳಲಿ ದೇವಸ್ಥಾನಗಳಿಗೆ ತಲಾ 1.5 ಲಕ್ಷ ರೂ., ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ.ಗಳನ್ನು ಭೋಜನ ನಿಧಿಗೆ ಸಮರ್ಪಿಸಿದ್ದರು. ಅನ್ನದಾನವೇ ಶ್ರೇಷ್ಠ ದಾನ ಎಂದು ನಂಬಿರುವ ಇವರು, ಈ ಬಾರಿ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭಿಕ್ಷೆಯ ಹಣ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ