ಪುತ್ತೂರು ನಗರ ಠಾಣೆಯ ASI ಬ್ರೈನ್ ಸ್ಕ್ರೋಕ್‌ನಿಂದ ಮೃತ್ಯು

ಪುತ್ತೂರು : ಪೆರುವಾಜೆ ಗ್ರಾಮದ ನಿವಾಸಿ ಎಎಸ್‌ಐ ಸುಂದರ ಕಾನಾವು ಅವರು ಪುತ್ತೂರು ನಗರ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತರಾದರು.

ಬ್ರೈನ್ ಸ್ಟ್ರೋಕ್‌ಗೆ ಒಳಗಾದ ಅವರು ಮಂಗಳೂರಿನ ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಸದ್ಯ ಮೃತರ ಪಾರ್ಥಿವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲ್ಕಿ ಪೊಲೀಸ್ ಠಾಣೆಯಿಂದ ಅವರ ವೃತ್ತಿ ಜೀವನ ಆರಂಭಗೊಂಡಿತ್ತು. ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಹೆಡ್ ಕಾನ್ಸ್ಟೇಬಲ್ ಆಗಿ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಸಂಪ್ಯ ಠಾಣೆಗೆ ಪೊಲೀಸ್ ಉಪ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದರು. ಕೆಲವು ದಿನಗಳ ಹಿಂದೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ, ಇಬ್ಬರು ಪುತ್ರರಿಗೆ ಗಾಯ; ಆರೋಪಿ ಅರೆಸ್ಟ್