ಪ್ರತಿಭಟನೆ ಸಂದರ್ಭ ಎಎಸ್ಐಯನ್ನು ತಳ್ಳಿ ಗಾಯ – ಡಿವೈಎಫ್ಐ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಪ್ರತಿಭಟನೆ ನಡೆದ ವೇಳೆ ಎಎಸ್ಐಯನ್ನು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ಡಿವೈಎಫ್‌ಐ ಸಂಘಟನೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.28ರಂದು ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಆಯೋಜನೆಗೊಂಡಿತ್ತು. ಈ ವೇಳೆ ಬಂದೋಬಸ್ತ್ ಕರ್ತವ್ಯನಿರತ ಕದ್ರಿ ಠಾಣೆಯ ಎಎಸ್ಸೆ ಮುತ್ತಪ್ಪ ಗೌಡ ಬಿ. ಅವರನ್ನು ಪ್ರತಿಭಟನಾಕಾರರು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ಎಎಸ್ಐಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಎಎಸ್ಐ ಮುತ್ತಪ್ಪ ಗೌಡ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ